Home⚖️ ಕಾನೂನು“ಬೆಂಗಳೂರಿನಲ್ಲಿ ಪ್ರತ್ಯೇಕ AI ಯೂನಿವರ್ಸಿಟಿ ಸ್ಥಾಪನೆ ಆಲೋಚನೆ”: ಸಚಿವ ಬಸವರಾಜ ರಾಯರೆಡ್ಡಿ

“ಬೆಂಗಳೂರಿನಲ್ಲಿ ಪ್ರತ್ಯೇಕ AI ಯೂನಿವರ್ಸಿಟಿ ಸ್ಥಾಪನೆ ಆಲೋಚನೆ”: ಸಚಿವ ಬಸವರಾಜ ರಾಯರೆಡ್ಡಿ

ಕರ್ನಾಟಕ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವ ನೀಡಿದೆ. ₹55,000 ಕೋಟಿ ಬಜೆಟ್, 2,500 ಕೋಟಿ ರೂ. ಬ್ಯಾಂಕ್ ನೆರವಿನೊಂದಿಗೆ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದೆ. ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು, ಬೆಂಗಳೂರಿನಲ್ಲಿ ಪ್ರತ್ಯೇಕ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ನಡೆಸಿದೆ.
ಬೆಂಗಳೂರು, ಸೆ.5: ದೇಶದಲ್ಲಿ ಸಾಕ್ಷರತೆಯ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಆರ್ಥಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಮುನ್ನಡೆ ಸಾಧಿಸಿವೆ. ಆದರೆ, ಸಾಕ್ಷರತೆಯನ್ನು ಇನ್ನೂ ಹೆಚ್ಚಿನ ಮಟ್ಟಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹಲವು ಪ್ರಗತಿಪರ ಹಾಗೂ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆ ಸುಮಾರು 6 ಕೋಟಿ 90 ಲಕ್ಷದಷ್ಟಿದ್ದು, ಪ್ರಸ್ತುತ 1 ಕೋಟಿ 32 ಲಕ್ಷ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದು ಅತ್ಯಂತ ದೊಡ್ಡ ಸಂಖ್ಯೆಯಾಗಿದೆ.

ಶಿಕ್ಷಣಕ್ಕೆ ಸರ್ಕಾರ ಗರಿಷ್ಠ ಮಹತ್ವ ನೀಡಿದ್ದು, ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಒಟ್ಟಾರೆಯಾಗಿ 55,000 ಕೋಟಿ ರೂಪಾಯಿ ಅನುದಾನವನ್ನು ಕಾಯ್ದಿರಿಸಲಾಗಿದೆ. ಹೊಸ ಯೋಜನೆಗಳಿಗಾಗಿ ಬ್ಯಾಂಕ್‌ಗಳಿಂದ 2,500 ಕೋಟಿ ರೂಪಾಯಿ ನೆರವು ಪಡೆದು, ರಾಜ್ಯಾದ್ಯಂತ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments